Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

ಓದುಗರ ಪತ್ರ: ಉತ್ತರ ಪ್ರದೇಶ ಸಚಿವರ ಹೇಳಿಕೆ ಹಾಸ್ಯಾಸ್ಪದ

ಓದುಗರ ಪತ್ರ

ಉತ್ತರ ಪ್ರದೇಶದ ಸಚಿವ ಸಂಜಯ ನಿಶಾದ ಅವರು ಪ್ರವಾಹ ಪೀಡಿತ ಪ್ರದೇಶ ಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ‘ಗಂಗೆ ನಿಮ್ಮ ಪಾದ ತೊಳೆಯಲು ಬಂದಿದ್ದಾಳೆ’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ.

ಸಚಿವರ ಈ ಬೇಜವಾಬ್ದಾರಿ ಹೇಳಿಕೆಯು ಹಾಸ್ಯಾಸ್ಪದವಾಗಿದೆ. ಯಾವ ಸಂದರ್ಭದಲ್ಲಿ ಹೇಗೆಮಾತನಾಡಬೇಕೆಂಬ ಕನಿಷ್ಠ ಪರಿಜ್ಞಾನದ ಕೊರತೆ ಇರುವುದು ದುರಂತವೇ ಸರಿ. ಜನಪ್ರತಿನಿಧಿಗಳು ಇನ್ನು ಮುಂದಾದರೂ ಜವಾಬ್ದಾರಿಯಿಂದ ಮಾತನಾಡಬೇಕು ಹಾಗೂ ಜನರ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಡಾ. ಎ.ಕೆ. ಜಯವೀರ, ಖೇಮಲಾಪುರ, ರಾಯಭಾಗ ತಾ

Tags:
error: Content is protected !!