Mysore
24
broken clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಗುಜರಾತ್‌, ಮಹಾರಾಷ್ಟ್ರದಂತೆ ಕರ್ನಾಟಕಕ್ಕೂ ಹೆಚ್ಚಿನ ಪ್ರೋತ್ಸಾಹ ಕೊಡಿ: ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ಮನವಿ

pm

ಬೆಂಗಳೂರು: ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಕೊಡುತ್ತಿರುವ ಸಹಕಾರ ಸಾಲುತ್ತಿಲ್ಲ, ಗುಜರಾತ್-ಮಹಾರಾಷ್ಟ್ರದ ಅಭಿವೃದ್ಧಿಗೆ ಒತ್ತು ಕೊಟ್ಟಂತೆಯೇ ಕರ್ನಾಟಕಕ್ಕೂ ಪ್ರೋತ್ಸಾಹ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು.

ಬೆಂಗಳೂರು ನಗರದ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಹಳದಿ ಮೆಟ್ರೋ ಮಾರ್ಗದ ಉದ್ಘಾಟನೆ ಹಾಗೂ 3ನೇ ಹಂತದ ಮೆಟ್ರೋ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಮಾತನಾಡಿದರು. ಪರೋಕ್ಷವಾಗಿ ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೊಡುತ್ತಿರುವ ಸಹಕಾರ, ಅನುದಾನ ಸಾಲುತ್ತಿಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.

ಮೆಟ್ರೋ ರೈಲ್ವೆ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಲಾ ಶೇ. 50ರ ವೆಚ್ಚದಲ್ಲಿ ಅನುಷ್ಠಾನಗೊಳ್ಳಬೇಕೆಂಬ ಒಪ್ಪಂದವಾಗಿತ್ತು. ಆದರೆ ಇಲ್ಲಿವರೆಗೂ ರಾಜ್ಯ ಸರ್ಕಾರವೇ ಹೆಚ್ಚಿನ ಹಣ ಖರ್ಚು ಮಾಡುತ್ತಿವೆ. ಕೇಂದ್ರ ಸರ್ಕಾರ ಇನ್ನು ಮುಂದಾದರೂ ಒಪ್ಪಂದದಂತೆ ಹೆಚ್ಚಿನ ಹಣ ನೀಡಲಿ ಎಂದು ಅಂಕಿ ಅಂಶಗಳನ್ನು ವಿವರಿಸಿದರು. ಮುಖ್ಯಮಂತ್ರಿಯವರ ಮಾತುಗಳನ್ನು ಪ್ರಧಾನಿಯವರು ಬಹಳ ಆಸಕ್ತಿಯಿಂದ ಆಲಿಸುತ್ತಿದ್ದದ್ದು, ಕಂಡು ಬಂತು.

Tags:
error: Content is protected !!