Mysore
22
few clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಆ.12 ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಮೈಸೂರು : ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12ರಿಂದ 14ರವರೆಗೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಹೇಳಿದರು.

ರಾಜ್ಯಾದ್ಯಂತ ನಡೆಯುವ ಅಹೋರಾತ್ರಿ ಧರಣಿ ಹಿನ್ನೆಲೆಯಲ್ಲಿ ಜಿಲ್ಲಾ ಸಮಿತಿ ವತಿಯಿಂದ ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನಿಷ್ಠ 10 ಸಾವಿರ ರೂ. ಕಡ್ಡಾಯವಾಗಿ ನಿಗದಿಯಾಗಬೇಕು. ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದ ಒಂದು ಸಾವಿರ ರೂ. ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ನೀಡಬೇಕು. ತರ್ಕಬದ್ಧಗೊಳಿಸಿ ಆಶಾ ಕಾರ್ಯಕರ್ತೆಯರ ಸಂಖ್ಯೆಯನ್ನು ಕಡಿತಗೊಳಿಸಬಾರದು, ಅವೈಜ್ಞಾನಿಕ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹಕ್ಕೊತ್ತಾಯ ಮಾಡಲಾಗುವುದು ಎಂದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಭಾಗ್ಯ, ಜಿಲ್ಲಾ ಉಪಾಧ್ಯಕ್ಷೆ ಮಣಿಲಾ, ನಗರ ಅಧ್ಯಕ್ಷೆ ಕೋಮಲಾ ಹಾಜರಿದ್ದರು.

Tags:
error: Content is protected !!