Mysore
21
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಬಿಜೆಪಿಗರ ರ್ಯಾಲಿ ಧರ್ಮಸ್ಥಳದ ಪರ, ನ್ಯಾಯದ ಪರ ಅಲ್ಲ ಎಂದ ಡಿಕೆಶಿ

DK Shivakumar

ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ ಮುಕ್ತಿ ಸಿಗಲಿ, ಅದು ಸತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಎಂದು ಎಸ್‌ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನು ಸಿಕ್ಕಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿಗರು ಧರ್ಮಸ್ಥಳದ ಪರವಾಗಿ ರ್ಯಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಷ್ಟು ದಿನ ರ್ಯಾಲಿ ಯಾಕೆ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದ ಅವರು, ಎಸ್‌ಐಟಿ ರಚನೆ ಆದಾಗ ಯಾಕೆ ಅವರು ಮಾತಾಡಲಿಲ್ಲ. ಈಗ ರಾಜಕೀಯ ಮಾಡೋಕೆ ಬಂದಿದ್ದಾರೆ. ಇದು ಧರ್ಮಸ್ಥಳ ಪರ ರ್ಯಾಲಿ ಅನ್ನೋದಕ್ಕಿಂತ ಬಿಜೆಪಿಯ ರಾಜಕೀಯ ರ್ಯಾಲಿ ಎನ್ನಬಹುದು ಎಂದು ಟೀಕೆ ಮಾಡಿದರು.

Tags:
error: Content is protected !!