Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸರಿದ ಕೆಎಸ್‌ಆರ್‌ಟಿಸಿ ಬಸ್‌

KSRTC bus veered off the road after the driver lost control

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ನುಗ್ಗಿದ ಘಟನೆ ಸೋಮವಾರಪೇಟೆ ಬಳಿ ನಡೆದಿದೆ.

ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್ಸೊಂದು ಮಾದಾಪುರ ಗ್ರಾಮದ ಸುಬ್ರಹ್ಮಣ್ಯ ದೇವಾಲಯದ ಬಳಿ ನಿಯಂತ್ರಣ ಕಳೆದುಕೊಂಡಿದೆ.

ಪರಿಣಾಮ ರಸ್ತೆ ಬದಿಗೆ ಸರಿದು ಅಲ್ಲೇ ಇದ್ದ ಸಣ್ಣ ದಿಬ್ಬಕ್ಕೆ ಡಿಕ್ಕಿಯಾಗಿ ನಿಂತಿದೆ. ಸದ್ಯ ಬಸ್‌ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Tags:
error: Content is protected !!