Mysore
21
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

Rain Intensifies; Red Alert Issued

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಿಗೂ ಕೂಡ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!