Mysore
21
haze

Social Media

ಬುಧವಾರ, 28 ಜನವರಿ 2026
Light
Dark

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಡಿ.ಕೆ ಶಿವಕುಮಾರ್‌

dk shivkumar

ಬೆಂಗಳೂರು : ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಹಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಚ್ಚರಿ ಮೂಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜೀವಗಳನ್ನು ಬಲಿ ಪಡೆದ ಕಾಲ್ತುಳಿತದ ಕುರಿತು ವಿಧಾನಸಭೆಯಲ್ಲಿ ಚರ್ಚೆಯ ಸಮಯದಲ್ಲಿ ಡಿಕೆಶಿ ಎಲ್ಲರ ಅಚ್ಚರಿಗೆ ಕಾರಣರಾದರು.

ಬಿಜೆಪಿ ಶಾಸಕರು ಜೋರಾಗಿ ಮೇಜು ಬಡಿಯುವ ಮೂಲಕ ಇದನ್ನು ಸ್ವಾಗತಿಸಿದರು, ಆದರೆ ಕಾಂಗ್ರೆಸ್ ಸದಸ್ಯರು ಮೌನವಾಗಿ ಕುಳಿತರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಉಂಟಾಗಲು ಶಿವಕುಮಾರ್ ಕಾರಣ ಎಂದು ಬಿಜೆಪಿ ಸದಸ್ಯರು ಆರೋಪಿಸಿದ ನಂತರ ಈ ಪ್ರಸಂಗ ನಡೆಯಿತು. ವಿಮಾನ ನಿಲ್ದಾಣದಿಂದ ಕ್ರೀಡಾಂಗಣಕ್ಕೆ ಆರ್‌ಸಿಬಿ ತಂಡದೊಂದಿಗೆ ಕನ್ನಡ ಧ್ವಜ ಬೀಸುತ್ತಾ ಮಾರ್ಗದುದ್ದಕ್ಕೂ ಡಿಕೆಶಿ ಸಂಭ್ರಮಿಸಿದ್ದರು ಎಂದು ವಿಪಕ್ಷ ನಾಯಕರು ಆರೋಪಿಸಿದರು.

ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಾ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಸದಸ್ಯರಾಗಿ ಮತ್ತು ಬೆಂಗಳೂರಿನ ಉಸ್ತುವಾರಿ ಸಚಿವರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ ಎಂದು ಶಿವಕುಮಾರ್ ಹೇಳಿದರು. “ನಾನು ಅವರಿಗೆ (ಆರ್‌ಸಿಬಿ) ಶುಭ ಹಾರೈಸಿದೆ, ನಾನು ಕಪ್ ಅನ್ನು ಸಹ ಮುತ್ತಿಟ್ಟೆ. ನಾನು ನನ್ನ ಕೆಲಸವನ್ನು ಮಾಡಿದ್ದೇನೆ’ ಎಂದು ಅವರು ಹೇಳಿದರು. ಈ ರೀತಿಯ ಅಪಘಾತಗಳು ಇತರ ರಾಜ್ಯಗಳಲ್ಲಿಯೂ ಸಂಭವಿಸಿವೆ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಒಮ್ಮೆ “ಆರ್‌ಸ್ಎಸ್ ಚಡ್ಡಿ’ ಧರಿಸಿದ್ದಾಗಿ ಒಪ್ಪಿಕೊಂಡಿದ್ದನ್ನು ನೆನಪಿಸಿದಾಗ, ಶಿವಕುಮಾರ್ ಇದ್ದಕ್ಕಿದ್ದಂತೆ ಆರ್‌ಸ್ಎಸ್ ಗೀತೆ ಹಾಡಿದರು.

‘ನಮಸ್ತೆ ಸದಾ ವತ್ಸಲೆ ಮಾತೃಭೂಮಿ…’ ಎಂದು ಹಾಡುತ್ತಿದ್ದಂತೆ ಬಿಜೆಪಿ ಶಾಸಕರು ಮೇಜು ತಟ್ಟಿದರು. ಸ್ಪೀಕರ್ ಯು.ಟಿ ಖಾದರ್ ಅವರು ಚೆನ್ನಾಗಿದೆ ಎಂದರು. ಈ ಸಾಲುಗಳನ್ನು ದಾಖಲೆಗಳಿಂದ ತೆಗೆದುಹಾಕಬಾರದು ಎಂದು ಆಶಿಸುತ್ತೇನೆ ಎಂದು ಬಿಜೆಪಿ ಶಾಸಕರೊಬ್ಬರು ನಗೆಯಾಡಿದರು.

Tags:
error: Content is protected !!