Mysore
14
few clouds

Social Media

ಗುರುವಾರ, 22 ಜನವರಿ 2026
Light
Dark

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಿಷ್ಟು.!

prathap simha

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ 100% ಧಾರ್ಮಿಕ ಆಚರಣೆ, ನವರಾತ್ರಿ ನಡೆಯುತ್ತದೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ. ಬಾನು ಮುಷ್ತಾಕ್‌ಗೆ ತಾಯಿ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆಯಾ? ಅವರು ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ? ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಿಸಿದರೆ ತಕರಾರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ? ರಿಷಬ್‌ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು, ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!