Mysore
23
overcast clouds

Social Media

ಶುಕ್ರವಾರ, 01 ಮೇ 2026
Light
Dark

ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜನ ಜಾಗೃತಿ

gansha

ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಕಾಲ್ನಡಿಗೆ ಜಾಥವನ್ನ ಮಾಡುವ ಮುಖಾಂತರ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಮನೆ ಮನೆಗೆ ತೆರಳಿ ಪರಿಸರಸ್ನೇಹಿ ಗೌರಿ ಗಣಪತಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಬಳಿಕ ಮಾತನಾಡಿದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಮಂಜುರಾಮ, ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಸಬೇಕೆಂದು ತಿಳಿಸಿದರು.

ಹಾಗೆಯೇ ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ.ರಾಘವೇಂದ್ರ ಅವರು ಮಾತನಾಡಿ, ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಉತ್ತಮ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ವೇಳೆ ರೋಟರಿ ಕ್ಲಬ್ ಕಾರ್ಯದರ್ಶಿ ಎನ್.ನಾಗೇಂದ್ರ, ರೇವಣ್ಣ, ದರ್ಶನ್, ಪುನೀತ್, ಏಕಾಂತ್, ಅಚೀವರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

Tags:
error: Content is protected !!