Mysore
24
overcast clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಗಡಿಯಲ್ಲಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಫಿನಿಶ್‌

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ವಲಯದ ಗುರೆಜ್‌ ವಲಯದ ನೌಶೆಹ್ರಾ ನಾರ್ಡ್‌ ಪ್ರದೇಶದ ನಿಯಂತ್ರಣ ರೇಖೆಯ ಬಳಿ ಇಂದು ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದೆ. ನೌಶೆಹ್ರಾ ನಾರ್‌ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಭಾರತೀಯ ಭೂಪ್ರದೇಶದಕ್ಕು ನುಸುಳಲು ಪ್ರಯತ್ನಿಸುತ್ತಿರುವ ಒಳನುಸುಳುವವರ ಗುಂಪಿನೊಂದಿಗೆ ಜಾಗರೂಕ ಪಡೆಗಳು ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಂದು ಹಾಕಿವೆ.

ಎನ್‌ಕೌಂಟರ್‌ ನಂತರ, ಭದ್ರತಾ ಪಡೆಗಳು ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಹೆಚ್ಚುವರಿ ಒಳನುಸುಳುವವರು ಅಥವಾ ಅನುಮಾನಾಸ್ಪದ ಚಟುವಟಿಕೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ.

Tags:
error: Content is protected !!