ತುಮಕೂರು ವಿಶ್ವವಿದ್ಯಾನಿಲಯಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಶಿವಕುಮಾರ ಸ್ವಾಮಿಗಳ ಹೆಸರನ್ನಿಡ ಬೇಕೆಂದು ಹಲವಾರು ಗಣ್ಯಾತಿಗಣ್ಯರು ಹಾಗೂ ಅಸಂಖ್ಯಾತ ಭಕ್ತ ವೃಂದದವರು ರಾಜ್ಯ ಸರ್ಕಾರ ವನ್ನು ಒತ್ತಾಯಿಸಿರುವುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
‘ನಡೆದಾಡುವ ದೇವರು ಎಂದೇ’ ಖ್ಯಾತರಾಗಿದ್ದ ಡಾ. ಶಿವಕುಮಾರ ಸ್ವಾಮಿಗಳು ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ತುಮಕೂರನ್ನು ಪುಣ್ಯಭೂಮಿಯನ್ನಾಗಿಸಿದ್ದರು.
ಅನ್ನ ದಾಸೋಹ, ಅಕ್ಷರ ದಾಸೋಹ, ಜ್ಞಾನ ದಾಸೋಹ ಮುಂತಾದವುಗಳ ಮೂಲಕ ಸಮಾಜಕ್ಕೆ ಬೆಳಕಾಗಿದ್ದ ಡಾ.ಶಿವಕುಮಾರ ಸ್ವಾಮಿಗಳು ಶತಾಯುಷಿಯಾಗಿ ತಮ್ಮ ದಿವ್ಯ ತೇಜಸ್ಸಿನಿಂದ ದೇಶಾದ್ಯಂತ ಹೆಸರು ಮಾಡಿದ್ದರು. ಇಂತಹವರ ಹೆಸರನ್ನು ತುಮಕೂರು ವಿಶ್ವವಿದ್ಯಾನಿಲಯಕ್ಕೆ ಸರ್ಕಾರ ನಾಮಕರಣ ಮಾಡಲಿ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು





