Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ.

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 57ನೇ ಸೆಷನ್ಸ್‌ ಕೋರ್ಟ್‌ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್‌ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು.

ನಂತರ ರಾಜ್ಯ ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ನಂತರ ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿ ಆರೋಪಿಗಳನ್ನು ಮತ್ತೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.

ಅಂತೆಯೇ ಪೊಲೀಸರು ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಮತ್ತೆ ಬಂಧಿಸಿ ಜೈಲಿಗಟ್ಟಿದ್ದರು. ಆದರೆ ಕೊಲೆ ಪ್ರಕರಣದ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ 57ನೇ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಪವಿತ್ರಾಗೌಡಗೆ ಬಿಗ್‌ ಶಾಕ್‌ ಎದುರಾಗಿದ್ದು, ಜೈಲಿನಲ್ಲೇ ಕಂಬಿ ಎಣಿಸುವ ಪರಿಸ್ಥಿತಿ ಎದುರಾಗಿದೆ.

Tags:
error: Content is protected !!