Mysore
25
overcast clouds

Social Media

ಶನಿವಾರ, 20 ಜೂನ್ 2026
Light
Dark

ಆರ್‌ಸಿಬಿ ಅಭಿಮಾನಿಗಳಿಗೆ ವಿರಾಟ್‌ ಕೊಹ್ಲಿ ಭಾವುಕ ಸಂದೇಶ

virat kohli

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ನಡೆದ ಮೂರು ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್‌ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ.

ಈ ಕುರಿತು ಆರ್‌ಸಿಬಿ ಸೋಷಿಯಲ್‌ ಮೀಡಿಯಾ ಪೇಜ್‌ ಮೂಲಕ ವಿರಾಟ್‌ ಕೊಹ್ಲಿ ಭಾವುಕ ಪೋಸ್ಟ್‌ ಮಾಡಿದ್ದಾರೆ.

ಜೂನ್.‌4ರಂತಹ ಹೃದಯಾಘಾತಕ್ಕೆ ಜೀವನದಲ್ಲಿ ಯಾವುದೂ ನಿಮ್ಮನ್ನು ನಿಜವಾಗಿಯೂ ಸಿದ್ಧಪಡಿಸುವುದಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅದು ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿದೆ.

ಇದನ್ನು ಓದಿ:ಸೌರವ್‌ ಗಂಗೂಲಿಗೆ ಮುಖ್ಯ ಕೋಚ್‌ ಹುದ್ದೆ

ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ.

ಒಟ್ಟಾಗಿ ನಾವು ಎಚ್ಚರಿಕೆಯಿಂದ, ಗೌರವದಿಂದ ಹಾಗೂ ಜವಾಬ್ದಾರಿಯಿಂದ ಮುಂದುವರಿಯುತ್ತೇವೆ ಎಂದು ವಿರಾಟ್‌ ಕೊಹ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವೆಬ್‌ಸೈಟ್‌ ಮೂಲಕ ಹೇಳಿದ್ದಾರೆ.

ಇನ್ನು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಳೆದ ಜೂನ್‌.4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಈವೆಂಟ್‌ ಮ್ಯಾನೇಜ್‌ ಮೆಂಟ್‌ ಕಂಪನಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

Tags:
error: Content is protected !!