Mysore
28
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಶಾಸಕ ವಿನಯ್‌ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

Vinay Kulkarni

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್‌ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ವಿನಯ್‌ ಕುಲಕರ್ಣಿ ಅವರ ಪುತ್ರ ಹೇಮಂತ್‌ ಅವರ ಕಾಲಿನ ಶಸ್ತ್ರಚಿಕಿತ್ಸೆ ಬೆಂಗಳೂರಿನಲ್ಲಿ ನಡೆಯುವುದರಿಂದ ವಿನಯ್‌ ಕುಲಕರ್ಣಿ ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ. ಜಾಮೀನು ಸಿಕ್ಕಿರುವ ಈ ಎರಡು ದಿನಗಳ ಅವಧಿಯಲ್ಲಿ ಯಾವುದೇ ಸಭೆ ಮಾಡುವಂತಿಲ್ಲ ಎಂದು ಶಾಸಕ ವಿನಯ್‌ಗೆ ನ್ಯಾಯಾಲಯ ಸೂಚನೆ ನೀಡಿದೆ.

Tags:
error: Content is protected !!