Mysore
26
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಓದುಗರ ಪತ್ರ: ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸೌಜನ್ಯದಿಂದ ವರ್ತಿಸಲಿ

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಮುಖ್ಯದ್ವಾರದ ಬಳಿ ಇರುವ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಕೌಂಟರ್‌ನಲ್ಲಿ ಭಾನುವಾರ ಮಧ್ಯಾಹ್ನ ೧೨ರ ಸಮಯದಲ್ಲಿ ಕೇರಳದ ಪ್ರವಾಸಿಗರು ಮತ್ತು ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಡುವೆ ಟಿಕೆಟ್ ಪಡೆಯುವ ವಿಚಾರಕ್ಕೆ ಗಲಾಟೆಯಾಗಿದೆ. ಮಾತಿನಲ್ಲಿ ಬಗೆಹರಿಸಬಹುದಾಗಿದ್ದ ಈ ವಿಷಯವನ್ನು ದೊಡ್ಡದು ಮಾಡಿ ಕೆಎಸ್ ಆರ್‌ಟಿ ಸಿ ಸಿಬ್ಬಂದಿ ಹೊಡೆದಾಟ ಮಾಡಿಕೊಂಡು ಸಮಯ ಹಾಳು ಮಾಡಿದರು.

ಇದರಿಂದ ಇನ್ನಿತರ ಪ್ರವಾಸಿಗರಿಗೆ ತಡವಾಗಿದಲ್ಲದೆ ಬೇಸರವೂ ಆಯಿತು. ಕೆಎಸ್ಆರ್‌ಟಿಸಿ ಸಿಬ್ಬಂದಿ ಪ್ರಯಾಣಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಿದರೆ ಇಂತಹ ಸಮಸ್ಯೆಗಳೇ ಬರುವುದಿಲ್ಲ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!