Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಅಕ್ಟೋಬರ್.‌17ರಂದು ಕಾವೇರಿ ತೀರ್ಥೋದ್ಭವ: ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ

ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.‌17ರಂದು ಶುಕ್ರವಾರ ಮಧ್ಯಾಹ್ನ 1.45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ.

ಶುಭಾ ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆಬಿರ್ಭವಿಸಲಿದ್ದಾಳೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ.

ಈ ಹಿನ್ನೆಲೆಯಲ್ಲಿ ಇದನ್ನು ಕಣ್ತುಂಬಿಕೊಳ್ಳಲು ಅಂದಿನ ದಿನ ಸಾವಿರಾರು ಜನರು ಸೇರಲಿದ್ದು, ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

Tags:
error: Content is protected !!