ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಜಾನಪದ ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದು, ನೆರೆದಿರುವ ಜನರ ಕಣ್ಮನ ಸೆಳೆಯುತ್ತಿವೆ.
ಇದನ್ನು ಓದಿ : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ ಆಗಿದೆ: ಸಿಎಂ ಸಿದ್ದರಾಮಯ್ಯ
ವೀರಗಾಸೆ, ಕಂಸಾಳೆ, ಕೊಂಬು ಕಹಳೆ, ಜಗ್ಗಲಗಿ ಮೇಳ ಸೇರಿದಂತೆ ನೂರಾರು ಕಲಾತಂಡಗಳು ಮೆರುಗು ನೀಡುತ್ತಿವೆ.
ಜಾನಪದ ಕಲಾತಂಡಗಳ ಜೊತೆಗೆ ಒಂದೊಂದರ ಹಿಂದೆ ಒಂದೊಂದು ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಕಣ್ಮನ ಸೆಳೆಯುತ್ತಿವೆ.





