Mysore
30
scattered clouds

Social Media

ಸೋಮವಾರ, 15 ಜೂನ್ 2026
Light
Dark

ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸಂಪುಟ ಸದಸ್ಯರಿಗಾಗಿ ಆಯೋಜಿಸಿರುವ ಭೋಜನಕೂಟದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ನಾವು ಆಗಾಗ್ಗೆ ಊಟಕ್ಕೆಂದು ಎಲ್ಲರೂ ಒಟ್ಟಿಗೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಪ್ರಶ್ನಿಸಿ ತೆರಳಿದರು.

Tags:
error: Content is protected !!