Mysore
28
broken clouds

Social Media

ಶನಿವಾರ, 16 ಮೇ 2026
Light
Dark

ಮತ್ತೆ ಸಿಡಿದೆದ್ದ ಗುತ್ತಿಗೆದಾರರ ಸಂಘ : ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ಡೆಡ್‌ಲೈನ್‌

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್, ನಂತರ ಅಧಿಕಾರಕ್ಕೇರಿತ್ತು. ನಾವು ಅಧಿಕಾರಕ್ಕೆ ಬಂದರೆ ಗುತ್ತಿಗೆದಾರ ಸಮಸ್ಯೆ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ, ಇನ್ನೂ ಬಾಕಿ ಬಿಡುಗಡೆ ಮಾಡಿಲ್ಲ ಎಂದು ಗುತ್ತಿಗೆದಾರರು ಸಿಡಿದೆದ್ದಿದ್ದಾರೆ.

ಕರ್ನಾಟಕ ರಾಜ್ಯ ಗುತ್ತಿಗೆದಾದರ ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ಕಮಿಷನ್ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಜಾಸ್ತಿಯಾಗಿದೆ. ಆದರೆ, 60, 80 ಪರ್ಸೆಂಟ್ ಎಂದು ನಾವು ಹೇಳಿಲ್ಲ ಎಂದಿದ್ದಾರೆ. 52 ಸಾವಿರ ಕೋಟಿ ರೂಪಾಯಿ ಬಾಕಿ ಬರಬೇಕಿತ್ತು. ಕೆಲ ಇಲಾಖೆಗಳು ಹಣ ಬಿಡುಗಡೆ ಮಾಡಿದ್ದು, 33 ಸಾವಿರ ಕೋಟಿ ರೂ. ಬಾಕಿ ಇದೆ ಎಂದು ಮಂಜುನಾಥ್ ಆರೋಪಿಸಿದ್ದಾರೆ. ಇನ್ನೊಂದು ತಿಂಗಳು ಕಾಯುತ್ತೇವೆ. ಆಗಲೂ ಹಣ ಬಿಡುಗಡೆಯಾಗಿಲ್ಲ ಎಂದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!