Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಓದುಗರ ಪತ್ರ: ಸರ್ಕಾರಿ ನೌಕರರಿಗೆ ರಾಜಕೀಯ ಚಟುವಟಿಕೆ ನಿಷೇಧಿಸಿ

ಓದುಗರ ಪತ್ರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳ ತಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಆರ್.ಆರ್.ಎಸ್. ಶತಮಾನೋತ್ಸವದಲ್ಲಿ ಭಾಗಿಯಾಗಿದ್ದ ತಮ್ಮ ಇಲಾಖೆಯ ಸಿಬ್ಬಂದಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲು ಕ್ರಮ ಕೈಗೊಂಡಿದ್ದಾರೆ.

ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಯಾವುದೇ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿರಬಾರದು ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿರ್ಬಂಽಸಿ ಸುತ್ತೋಲೆ ಹೊರಡಿಸುವುದು ಅಗತ್ಯವಾಗಿದೆ.

– ಹೆಚ್.ಕೆ.ಶಶಿಕುಮಾರ್, ಮೈಸೂರು

Tags:
error: Content is protected !!