Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಪ್ರದೀಪ್‌ ಈಶ್ವರ್‌ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ : ಎಂಎಲ್‌ಎ ಪ್ರದೀಪ್‌ ಈಶ್ವರ್‌ ಬಣ್ಣ ನಿಂದಿಸಿದ ಪ್ರತಾಪ್‌ ಸಿಂಹ..!

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಶಾಸಕ ಪ್ರದೀಪ್ ಈಶ್ವರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನ ಹಾಗೂ ಪ್ರದೀಪ್‌ ಈಶ್ವರ್‌ ಅವರ ಬಣ್ಣದ ಬಗ್ಗೆ ನಿಂದಿಸಿ ಟೀಕೆಗಳನ್ನು ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ, ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ. ಇನ್ನೊಂದು ಬಾರಿ ನನ್ನ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಮಗನೇ. ಅವನಿಗೆ ಅವನ ಭಾಷೆಯಲ್ಲೇ ಉತ್ತರ ಕೊಡುತ್ತಾ ಕರ್ನಾಟಕದ ಜನರ ಕ್ಷಮೆ ಕೇಳುತ್ತೇನೆ ಎಂದು ತಮ್ಮ ತಾಯಿ ವಿರುದ್ಧ ಮಾತನಾಡಿದ್ದನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಮೈಸೂರು | ಅರಮನೆ ಮುಂಭಾಗ ಧರೆಗುರುಳಿದ ಬೃಹತ್‌ ಮರ ; ಆಟೋ ಜಖಂ

ನನ್ನ ತಾಯಿ ಬಗ್ಗೆ ಪ್ರದೀಪ್ ಈಶ್ವರ ಅವಹೇಳನವಾಗಿ ಮಾತಾಡಿದ್ದಾನೆ. ಮುಳ್ಳುಹಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್ ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರದ ಕಡೆಗೆ ಬಂದಿದ್ದರೆ ನೀನು ಕೂಡ ಸುಂದರವಾಗಿಯೇ ಹುಟ್ಟುತ್ತಿದ್ದೆ. ಎಚ್ಚರಿಕೆ ಇರಬೇಕು ಮಗನೇ ನನ್ನ ಬಗ್ಗೆ ಮಾತಾಡುವಾಗ ಎಂದು ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಾಪ್ರಹಾರ ನಡೆಸಿದ್ದಾರೆ.

ಪ್ರಿಯಾಂಕ್‌ ವಿರುದ್ಧ ವಾಗ್ದಾಳಿ
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ಮಾತನಾಡಿದ ಪ್ರತಾಪ, ಶೈಕ್ಷಣಿಕ ಅರ್ಹತೆ ಮೀರಿದ ಐಟಿ-ಬಿಟಿ ಖಾತೆಯನ್ನು ಪ್ರಿಯಾಂಕ್ ಖರ್ಗೆಗೆ ಕೊಟ್ಟಿದ್ದಾರೆ. ಪಿಯುಸಿ ಫೇಲ್ ಆದ ಮಗನಿಗೆ ಅವರ ತಂದೆ ಒಳ್ಳೆಯ ಆಸ್ತಿ ಮಾಡಿ, ಸಚಿವ ಸ್ಥಾನ ಕೊಡಿಸಿದ್ದಾರೆ. ಎರಡೂವರೆ ವರ್ಷದಲ್ಲಿ ಅವರು ಮಾಡಿದ ಒಂದು ಸಾಧನೆ ಹೇಳಲಿ ಎಂದು ಸವಾಲು ಹಾಕಿದರು.

Tags:
error: Content is protected !!