Mysore
24
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಅನಗತ್ಯವಾಗಿ ಮತ್ತೆ ಅದನ್ನೇ ಮಾತನಾಡಿ ವಿವಾದ ಸೃಷ್ಟಿ ಮಾಡುವುದಿಲ್ಲ. ನನ್ನ ಹೇಳಿಕೆ ವಿವಾದ ಪಡೆದ ಕ್ಷಣವೇ ಅದಕ್ಕೆ ಸ್ಪಷ್ಟೀಕರಣ ಕೊಟ್ಟಿದ್ದೇನೆ. ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ಒಳಗೆ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಯತೀಂದ್ರ ಸಿದ್ದರಾಮಯ್ಯ

ಈ ವಿಚಾರವಾಗಿ ಪಕ್ಷದಿಂದ ನೋಟೀಸ್ ಬಂದಾಗ ನೋಡಿಕೊಳ್ಳೋಣ ಬಿಡಿ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ ಎಂದರು.

Tags:
error: Content is protected !!