ಬೆಂಗಳೂರು: ನಂದಿನಿ ತುಪ್ಪದ ಬೆಲೆಯನ್ನು 610 ರೂಗಳಿಂದ 700 ರೂಪಾಯಿಗೆ ಹೆಚ್ಚಳ ಮಾಡಿರುವ ಕೆಎಂಎಫ್ ನಿರ್ಧಾರವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಇದನ್ನು ಓದಿ: ಮತ್ತೆ ನಂದಿನಿ ಹಾಲಿನ ದರ ಏರಿಕೆ…?
ಈ ಕುರಿತು ಮಾತನಾಡಿರುವ ಅವರು, ನಂದಿನಿ ತುಪ್ಪದ ದರ ಏರಿಕೆಯಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್ನ ಪ್ರಮುಖ ಉತ್ಪನ್ನವಾದ ನಂದಿನಿ ತುಪ್ಪದ ದರ ಹೆಚ್ಚಳವು ಹಾಲು ಉತ್ಪಾದಕರು ನ್ಯಾಯಯುತ ಬೆಲೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.





