Mysore
15
scattered clouds

Social Media

ಬುಧವಾರ, 21 ಜನವರಿ 2026
Light
Dark

ಸುಂಟಿಕೊಪ್ಪ | ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

Student Death

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಏನಿದು ಘಟನೆ ?
ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಅವರ ಪುತ್ರ ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲೇ ಇರುವ ಖಾಸಗಿ ಕ್ಲಿನಿಕ್​ಗೆ ತೆರಳಿದ್ದಾರೆ. ಇವರನ್ನು ಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ ಮಾತ್ರೆ ಜೊತೆಗೆ ಇಂಜೆಕ್ಷನ್​ ಕೂಡ ನೀಡಿದ್ದಾರೆ. ಆದರೂ ನೋವು ಕಡಿಮೆಯಾಗದ ಕಾರಣ ಮತ್ತೊಂದು ಇಂಜೆಕ್ಷನ್​ ಕೊಟ್ಟು ಮನೆಗೆ ಕಳುಹಿಸಿದ್ದಾರೆ. ಕ್ಲಿನಿಕ್​ನಿಂದ ಮನೆಗೆ ಆಗಮಿಸಿದ ವಿನೋದ್ ಕೆಲವೇ ಹೊತ್ತಿನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಆಟೋದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ಕರೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿನೋದ್ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:-ಮತ್ತೆ ಕೆಂಪಾದ JNU : ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಡ ಒಕ್ಕೂಟಕ್ಕೆ ಭರ್ಜರಿ ಗೆಲುವು

ಮೃತ ವಿನೋದ್​ಗೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ಕಳೆದ ಕೆಲವು ದಿನಗಳಿಂದ ತಮ್ಮ ಮನೆಯನ್ನ ತಾವೇ ನವೀಕರಿಸಿದ್ದರು. ಮರಗಳನ್ನ ಇಳಿಸಿದ್ದರಿಂದ ಸ್ವಲ್ಪ ಭುಜ ನೋವಿದೆ ಅಂತ ಕ್ಲಿನಿಕ್​ಗೆ ತೆರಳಿದ್ದೇ ಅವರ ಜೀವಕ್ಕೀಗ ಮುಳುವಾಗಿದೆ. ಭುಜ ನೋವಿಗೆ ಕಾರಣ ಏನು ಎಂದು ವೈದ್ಯರು ಸರಿಯಾಗಿ ಪರಿಶೀಲಿಸದೆ ಎರಡೆರಡು ಇಂಜೆಕ್ಷನ್ ನೀಡಿದ್ದೇ ವಿನೋದ್​ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಖಾಸಗಿ ಕ್ಲಿನಿಕ್​ ವೈದ್ಯರಾಗಿರೋ ಯಶೋಧರ್ ಪೂಜಾರಿ ವಿರುದ್ಧ ಈ ಹಿಂದೆಯೂ ಹಲವು ದೂರುಗಳಿವೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ವಿನೋದ್ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

Tags:
error: Content is protected !!