ಬ್ರಸ್ಬೇನ್ : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ಶನಿವಾರ ನಡೆದ ಅಂತಿಮ ಟಿ-೨೦ ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಆ ಮೂಲಕ ಭಾರತ ೨-೧ರಿಂದ ಸರಣಿ ವಶಪಡಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ಶುಭ್ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ೪.೫ ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ೫.೨ ರನ್ ಗಳಿಸಿದ್ದರು.
ಆ ವೇಳೆ ಮೈದಾನದಲ್ಲಿ ಮಳೆ ಆರಂಭಗೊಂಡಿತು. ಮಳೆ ನಿಲ್ಲದ ಹಿನ್ನೆಲೆಯಲ್ಲಿ ಅಂಪೈರ್ಗಳು ರದ್ದು ಮಾಡಲು ನಿರ್ಧರಿಸಿದರು. ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಅಭಿಷೇಕ್ ಶರ್ಮ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.





