ಕಲಬುರ್ಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚನಲಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.
ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚನಲ ವಿಚಾರ ಕಲಬುರ್ಗಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಇದನ್ನು ಓದಿ: ಆರ್ಎಸ್ಎಸ್ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಚಿತ್ತಾಪುರದಲ್ಲಿ 300 ಕಾರ್ಯಕರ್ತರಿಂದ ಆರ್ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಎಜಿ ಶಶಿಕಿರಣ ಶೆಟ್ಟಿ ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಮಾಹಿತಿ ನೀಡಿದ್ದಾರೆ.
ಒಂದು ಬಾರಿಯ ಅವಕಾಶವಾಗಿ ಸರ್ಕಾರ ಪಥಸಂಚಲನಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್.16ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಯಲಿದೆ.





