Mysore
27
scattered clouds

Social Media

ಬುಧವಾರ, 21 ಜನವರಿ 2026
Light
Dark

ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಮೈಸೂರು: ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಭಯೋತ್ಪಾದನೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಘಟನೆಯಿಂದ ಬುರ್ಖಾ ಧರಿಸಿರುವ ಮಹಿಳೆಯರ ಮೇಲೆ ಅನುಮಾನ ಪಡುವಂತಾಗಿದೆ. ಹಿಂದೂಗಳು ಒಂದಾಗಿ ಮೂಲಭೂತವಾದಿಗಳ ವಿರುದ್ಧ ಹೋರಾಡುವಂತೆ ಕರೆ ನೀಡಿದರು.

ಹಿಂದೂ ಜಾಗರಣ ವೇದಿಕೆಯ ಸಂಚಾಲಕ ವಸಂತ್ ಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗಿಯಾಗಿದ್ದರು.

Tags:
error: Content is protected !!