Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆ: ಕಾಮನ್ ವೆಲ್ತ್ ಹಗರಣವೇ ಮಾದರಿ ಎಂದ ಆರ್‌.ಅಶೋಕ್‌

r ashok

ಬೆಂಗಳೂರು: ತಜ್ಞರ ಸಮಿತಿ ಸಲ್ಲಿಸಿರುವ ತಾಂತ್ರಿಕ ವರದಿ “ಬಾಡಿಗೆ ಮಾದರಿ” ಬೇಡ ಎಂದು ಶಿಫಾರಸ್ಸು ಮಾಡಿದ್ದರೂ ಸಹ ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ₹613 ಕೋಟಿ ರೂಪಾಯಿ ವೆಚ್ಚ ಮಾಡಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಯುಪಿಎ ಅವಧಿಯಲ್ಲಿ ನಡೆದ ಕಾಮನ್ ವೆಲ್ತ್ ಹಗರಣವೇ ಮಾದರಿ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಯುಪಿಎ ಸರ್ಕಾರದ ಸಾಲು ಸಾಲು ಹಗರಣಗಳು ಹೇಗೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಿ ಕೇಂದ್ರದಲ್ಲಿ ಶಾಶ್ವತವಾಗಿ ಅಧಿಕಾರದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆಯೋ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಈ ಬ್ರಹ್ಮಾಂಡ ಭ್ರಷ್ಟಾಚಾರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಶಾಶ್ವತವಾಗಿ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದ್ದಾರೆ.

Tags:
error: Content is protected !!