Mysore
23
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಸಿದ್ದರಾಮಯಯ್ಯ ಕಾಂಗ್ರೆಸ್ಸನ್ನೇ ಮುಗಿಸಲು ಮುಂದಾಗಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ವಾಗ್ದಾಳಿ 

ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್‌ ಶೇರಿಂಗ್‌ ಚರ್ಚೆಗಳೇ ಕಾರಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ದಿನ ಬೆಳಗಾದರೆ ಸಾಕು ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯ ಪ್ರವೇಶಿಸಿ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ನಿಂದ ಸಿದ್ದರಾಮಯ್ಯ ಅವರನ್ನು ಹೊರಹಾಕಿದಾಗ ಆಶ್ರಯ ಕೊಟ್ಟಿದ್ದು ಕಾಂಗ್ರೆಸ ಪಕ್ಷ. ಆದರೆ ಈಗ ಸಿದ್ದರಾಮಯ್ಯ ಕಾಂಗ್ರೆಸ್‌ ಪಾರ್ಟಿಯನ್ನೇ ಮುಗಿಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರ ಸಮಕ್ಷಮದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಆ ಸಂದರ್ಭದಲ್ಲಿ ಡಿಕೆಶಿ, ಡಿ.ಕೆ.ಸುರೇಶ್‌ ಸಹೋದರರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರು ಉಪಸ್ಥಿತರಿದ್ದರು. ಆದರೆ ಈ ಬಗ್ಗೆ ಯಾರೊಬ್ಬರೂ ಈಗ ಬಾಯಿ ಬಿಡುತ್ತಿಲ್ಲ ಎಂದು ಬಹಿರಂಗಪಡಿಸಿದರು.

ಡಿಕೆಶಿಗೆ ಅಧಿಕಾರ ಹಸ್ತಾಂತರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಾರ್ಟಿ ಧೂಳಿಪಟವಾಗಲಿದೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!