Mysore
24
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ ನೋಟಿಸ್‌ ನೀಡಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಇನಾಯತ್‌ ಆಲಿ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ.

ಒಂದು ವಾರದಲ್ಲಿ ತನಿಖೆಗೆ ಹಾಜರಾಗುವಂತೆ ಡಿಕೆ ಆಪ್ತ ಇನಾಯತ್‌ಗೆ ನೋಟಿಸ್‌ ನೀಡಲಾಗಿದೆ. ವಿನಾಯತ್‌ ಅವರ ಮನೆಗೆ ಬಂದು ದೆಹಲಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಪ್ರಕರಣ ಸಂಬಂಧ ಹಲವು ವರ್ಷಗಳಿಂದ ಇನಾಯತ್‌ ವಿಚಾರಣೆ ನಡೆದಿತ್ತು. ಮುಂದುವರಿದ ಭಾಗವಾಗಿ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಸಂಸ್ಥೆಗೆ ಇನಾಯತ್‌ ಸಹ ಹಣ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೇಣಿಗೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

Tags:
error: Content is protected !!