Mysore
23
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ಕೊಡಲಿ ಎಂದು ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿದರು.

ಇದನ್ನು ಓದಿ : ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಬಿಜೆಪಿ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧ ಮಡುತ್ತಿದೆ. ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಜಾತಿ ಜಾತಿಗೆ, ಧರ್ಮ ಧರ್ಮಗಳಿಗೆ ವೈಯಕ್ತಿಕ ನಿಂದನೆ ಮಾಡುವವರಲ್ಲಿ ಅವರು ಮೊದಲಿಗರು. ಸಂವಿಧಾನದ ಪ್ರಕಾರ ಬಿಜೆಪಿಯವರು ಮೊದಲು ನಡೆದುಕೊಳ್ಳಲಿ. ಸಂವಿಧಾನ ರಕ್ಷಣೆಗೆ ವಿಧೇಯಕ ಮಂಡನೆ ಮಾಡುತ್ತಿದ್ದೇವೆ ಎಂದು ಹೇಳಿದರು.

Tags:
error: Content is protected !!