Mysore
29
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ:-ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Tags:
error: Content is protected !!