Mysore
22
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಚಿವ ವೆಂಕಟೇಶ್‌ ಅವರು ಸ್ವಾಗತಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಮೈಸೂರು ವಿಮಾನ ನಿಲ್ದಾಣದಿಂದ ಮಳವಳ್ಳಿಗೆ ತೆರಳಿ, ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Tags:
error: Content is protected !!