Mysore
26
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಹೆಮ್ಮಿಗೆಯಲ್ಲಿ ಹುಲಿ ದಾಳಿಗೆ ಹಸು ಬಲಿ: ರೈತರಲ್ಲಿ ಆತಂಕ

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.

ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್‌ರಿಗೆ ಸೇರಿದ ಹಸುವನ್ನು ಹೊಲದಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಕೆಲಭಾಗ ತಿಂದು ಹಾಕಿದೆ. ಬುಧವಾರ ಗುರುಪುರದ ಹುಣಸೆಕಟ್ಟೆ ಹಳ್ಳದಲ್ಲಿ ಗುರುವಾರ ಹೆಮಿಗೆಯಲ್ಲಿ ಹುಲಿದಾಳಿ, ಸದ್ಯಕ್ಕೆ ಹನಗೋಡು ಭಾಗದಲ್ಲಿ ಹುಲಿ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಲಯದ ಆರ್ ಎಫ್‌ಓ ಸುಬ್ರಹ್ಮಣ್ಯ, ಸಿಬ್ಬಂದಿ ಭೇಟಿ ಮಾಡಿ ಪರಿಶೀಲಿಸಿದ್ದಾರೆ.

ಇದನ್ನು ಓದಿ: ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹೆಮ್ಮಿಗೆ ಸುತ್ತಮುತ್ತ ಹುಲಿ ಓಡಾಡುತ್ತಿದ್ದು, ಅನೇಕರಿಗೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಲೇ ಇದ್ದರೂ ಹುಲಿ ಪತ್ತೆಯಾಗುತ್ತಿಲ್ಲ, ಇನ್ನಾದರೂ ವೈಜ್ಞಾನಿಕವಾಗಿ ಕಾರ್ಯಾಚರಣೆ ಕೈಗೊಂಡು ಹುಲಿ ಸೆರೆ ಹಿಡಿಯುವಂತೆ ಗ್ರಾಪಂ ಅಧ್ಯಕ್ಷ ಹೆಮ್ಮಿಗೆ ಪಾಪಣ್ಣ ಒತ್ತಾಯಿಸಿದ್ದಾರೆ.

Tags:
error: Content is protected !!