Mysore
33
scattered clouds

Social Media

ಭಾನುವಾರ, 10 ಮೇ 2026
Light
Dark

ಬಳ್ಳಾರಿ ಘರ್ಷಣೆ | ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಜಮೀರ್‌ ; ಮನೆ ಕಟ್ಟಿಸಿ ಕೊಡುವ ಭರವಸೆ

ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಬಳ್ಳಾರಿಯ ಹುಸೇನ್ ನಗರದಲ್ಲಿರುವ ರಾಜಶೇಖರ್ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಇದೇ ವೇಳೆ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿದರು.

ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ಸರ್ಕಾರ ಸದಾ ಇರಲಿದೆ ಎಂದು ಭರವಸೆ ನೀಡಿದ ಸಚಿವರು, ರಾಜಶೇಖರ್ ಕುಟುಂಬಕ್ಕೆ ಮನೆ ಕಟ್ಟಿ ಕೊಡಲಾಗುವುದು ಪಕ್ಷದ ವತಿಯಿಂದಲೂ ನೆರವು ನೀಡಲಾಗುವುದು ಎಂದರು.

Tags:
error: Content is protected !!