Mysore
33
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

ಓದುಗರ ಪತ್ರ: ಜಯಚಾಮರಾಜ ಒಡೆಯರ್ ವೃತ್ತದ ಹೆಸರು ಉಳಿಯಲಿ

ಓದುಗರ ಪತ್ರ

ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.

ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ೧೯೩೯ ರಲ್ಲಿ ಮೈಸೂರು ಜಿಲ್ಲೆಯಿಂದ ಪ್ರತ್ಯೇಕವಾಗಿ ಮಂಡ್ಯ ಜಿಲ್ಲಾ ಕೇಂದ್ರವಾಗಿ ರೂಪುಗೊಂಡಿತು.

ಮೈಸೂರು ಸಂಸ್ಥಾನವನ್ನಾಳಿದ ಒಡೆಯರ್ ವಂಶದ ಕೊನೆಯ ಅರಸರಾದ ಜಯಚಾಮರಾಜ ಒಡೆಯರ್ ಅವರು ಮಂಡ್ಯದಲ್ಲಿ ಶಿಕ್ಷಣಕ್ಕಾಗಿ ಕಲ್ಲುಕಟ್ಟಡ, ಸಾರ್ವಜನಿಕರ ಅನುಕೂಲಕ್ಕಾಗಿ ಮಾರುಕಟ್ಟೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮಂಡ್ಯದಲ್ಲಿ ಇರುವ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ನಾಡ ಪ್ರಭು ಕೆಂಪೇಗೌಡ ಪ್ರತಿಮೆ ನಿರ್ಮಿಸುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಅಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿ ಸಿದರೆ ಜಯಚಾಮರಾಜ ಒಡೆಯರ್ ಅವರ ಹೆಸರು ಅಳಿಸಿಹೋಗಿ ಕೆಂಪೇಗೌಡ ವೃತ್ತ ಎಂದು ಕರೆಯಲಾಗುತ್ತದೆ. ಆ ರೀತಿಯಾದರೆ ಅದು ಚಾಮರಾಜ ಒಡೆಯರ್ ಅವರಿಗೆ ಅಪಮಾನ ಮಾಡಿದಂತಾಗುತ್ತದೆ. ಜಯಚಾಮ ರಾಜ ಒಡೆಯರ್ ವೃತ್ತದ ಹೆಸರನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕಾಗಿದೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸೂಕ್ತ ಮತ್ತು ಪರ್ಯಾಯ ಸ್ಥಳವನ್ನು ಗುರುತಿಸಲಿ.

 – ಸಿ. ಸಿದ್ದರಾಜು ಆಲಕೆರೆ, ಮಂಡ್ಯ

 

 

Tags:
error: Content is protected !!