ಮೈಸೂರು : ನಟ ದರ್ಶನ್ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಸಂಭ್ರಮದಿಂದ ಆಚರಿಸಿದೆ. ಆದರೆ ನಟ ದರ್ಶನ್ ಜೈಲಿನಲ್ಲಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮಿ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ. ಸದ್ಯ ಈ ಫೋಟೊ ಹಾಗು ವಿಡಿಯೊವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿದ್ದಾರೆ.
ದರ್ಶನ್ ತಮ್ಮ ಫಾರ್ಮ್ಹೌಸ್ದಲ್ಲಿ ಕುದುರೆಯನ್ನು ಸಾಕಿದ್ದಾರೆ. ದರ್ಶನ್ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ಎತ್ತುಗಳಿಗೆ ಪೂಜೆ ಸಲ್ಲಿಸಿದ ಫೋಟೊವನ್ನು ಹಂಚಿಕೊಂಡಿದ್ದು, ಕುದುರೆಯನ್ನು ಮುದ್ದು ಮಾಡುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾವುಕ ನುಡಿಗಳ ಕಾಮೆಂಟ್ಗಳನ್ನುಸಹ ಹಾಕಿ, ಅವರಿಗೆ ಧೈರ್ಯ ತುಂಬುತ್ತಿದ್ದಾರೆ.
ಚಿತ್ರದರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ.





