Mysore
33
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

dgp murder case

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ತಾಣವಾಗಿದೆ. ಇದು ಮೈಸೂರಿನ ಅತಿ ಎತ್ತರದ ಬೆಟ್ಟಗಳಲ್ಲಿ ಒಂದಾಗಿದ್ದು, ನೈಸರ್ಗಿಕ ಸೌಂದರ್ಯದಿಂದ ಚಾರಣಕ್ಕೆ ಹೆಸರುವಾಸಿಯಾಗಿದೆ. ಈ ಅದ್ಭುತ ತಾಣದಲ್ಲಿ ಕುಡಿಯುವ ನೀರು, ಶೌಚಾಲಯ ಮೊದಲಾದ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ. ಇನ್ನಾದರೂ ಸಂಬಂಧಪಟ್ಟವರು ಈ ಸ್ಥಳವನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯ ಕಲ್ಪಿಸುವುದು ಅಗತ್ಯವಾಗಿದೆ.

-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು

Tags:
error: Content is protected !!