Mysore
25
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮನಾಥ್‌ ಅವರ ಪೀಠ, ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಇದೀಗ ಸುಪ್ರೀಂಕೋರ್ಟ್‌ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸುವ ಮೂಲಕ ಕರ್ನಾಟಕಕ್ಕೆ ಹಿನ್ನಡೆ ಆಗಿದೆ.

ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಾಧೀಕರಣ ರಚಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಇದೀಗ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸಿದೆ. ಜಲವಿವಾದ ನ್ಯಾಯಾಧೀಕರಣ ರಚನೆ ಮಾಡುವಂತೆ ಆದೇಶ ಹೊರಡಿಸಿದೆ.

 

Tags:
error: Content is protected !!