Mysore
28
overcast clouds

Social Media

ಸೋಮವಾರ, 20 ಏಪ್ರಿಲ 2026
Light
Dark

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗರಿಗೆ ಮತ್ತಷ್ಟು ಮೆಟ್ರೋ ವಿಸ್ತರಣೆ ಆಗಬೇಕಿದೆ. ಇದರಿಂದ ದರ ಹೆಚ್ಚಳ ಅನಿವಾರ್ಯ. ಬಿಎಂಆರ್‌ಸಿಎಲ್‌ ರಾಜ್ಯ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾಗಿದೆ. ದರ ಹೆಚ್ಚಳ ಕೇವಲ ಒಂದು ಕಡೆಯಿಂದ ಮಾಡಲು ಸಾಧ್ಯವಿಲ್ಲ ಎಂದರು.

ಮೆಟ್ರೋ ಪ್ರಯಾಣದ ದರ ಶೇಕಡ.5ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಫೆಬ್ರವರಿ.9ರಿಂದ ಇದು ಜಾರಿಗೆ ಬರಲಿದೆ. ಈ ಭಗ್ಗೆ ಬಿಎಂಆರ್‌ಸಿಎಲ್‌ ಅಧಿಕೃತ ಆದೇಶ ಹೊರಡಿಸಿದೆ.

Tags:
error: Content is protected !!