Mysore
26
clear sky

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಅರೇಳು ತಿಂಗಳುಗಳಿಂದ ಹುಲ್ಲಹಳ್ಳಿ ಗ್ರಾಮದ ಆರು ಮತ್ತು ಏಳನೆಯ ವಾರ್ಡ್ಗಳಲ್ಲಿ ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಜನ ಜಾನುವಾರು ಸಾಕಷ್ಟು ಪರಿ ತಪ್ಪಿಸಿದರು ಕೂಡ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಡಿಯುವ ನೀರು ಕಲ್ಪಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಸಾಕಷ್ಟು ಬಾರಿ ಗ್ರಾಮಸ್ಥರು ಮನವಿಯನ್ನು ಮಾಡಿದ್ದಾರೆ. ಗ್ರಾಮದ ಮುಂಭಾಗದಲ್ಲೇ ಕಪಿಲಾ ನದಿ ಹಾದು ಹೋಗಿದ್ದರೂ ಕೂಡ ಬೇಸಿಗೆಗೂ ಮುನ್ನ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಹುಲ್ಲಹಳ್ಳಿ ಗ್ರಾಮಸ್ಥರನ್ನು ರೊಚ್ಚಿಗೇಳಿಸಿದೆ.

ಎಷ್ಟೇ ಮನವಿ ಮಾಡಿದರು ಸ್ಪಂದಿಸದ ಪಿಡಿಒ ಮತ್ತು ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಒಳಗೆ ಯಾರೂ ಕೂಡ ಪ್ರವೇಶ ಮಾಡದಂತೆ ದಿಗ್ಬಂದನ ವಿಧಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.

 

Tags:
error: Content is protected !!