Mysore
27
clear sky

Social Media

ಮಂಗಳವಾರ, 21 ಏಪ್ರಿಲ 2026
Light
Dark

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ ಇರುವ ಟೋಲ್ ಗೇಟ್ ಬಳಿ ಮಾತ್ರ ನಿಲ್ಲಿಸುತ್ತಿದ್ದು. ಇದರಿಂದಾಗಿ ಯಡತೊರೆ ಗ್ರಾಮದಿಂದ ಶಾಲಾ ಕಾಲೇಜಿಗೆ ವಿದ್ಯಾರ್ಥಿಗಳು ಸಕಾಲಕ್ಕೆ ತಲುಪಲು ಸಾಧ್ಯವಗುತ್ತಿಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎಸ್.ಪ್ರಗತಿ, ದ್ವಿತೀಯ ಬಿಎ ಪತ್ರಿಕೋದ್ಯಮ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

Tags:
error: Content is protected !!