Mysore
21
broken clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಡಿ ಗ್ರೂಪ್ ನೌಕರ ಶರತ್ ಎಂಬಾತನೇ ಬಂಧಿತ ಆರೋಪಿ. ಮಡಿಕೇರಿಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಕಚೇರಿಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ನೌಕರ ಶರತ್ ಎಂಬಾತ ಕುಶಾಲನಗರ ಸಮೀಪ ವೀರಭೂಮಿ ಬಳಿ ತನ್ನ ಮನೆಯಲ್ಲಿ ಗುತ್ತಿಗೆದಾರ ಲೈಸೆನ್ಸ್ ನೀಡಲು ರಾಘವೇಂದ್ರ ಎಂಬುವರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಸಿಕ್ಕಿಬಿದ್ದಿದ್ದಾನೆ. ಗುತ್ತಿಗೆದಾರ ಲೈಸೆನ್ಸ್ ನೀಡಲು ತನಗೆ 10 ಸಾವಿರ ಮತ್ತು ತನ್ನ ಕಚೇರಿಯಲ್ಲಿ ರೂ. 4 ಸಾವಿರ ಸೇರಿದಂತೆ ಒಟ್ಟು 14 ಸಾವಿರ ರೂಗಳಿಗೆ ಬೇಡಿಕೆ ಇಟ್ಟಿದ್ದ ಶರತ್, 10 ಸಾವಿರ ರೂಗಳನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದಾರೆ.

 

Tags:
error: Content is protected !!