Mysore
27
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ.

ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿ.ಎಂ.ಗೋಪಾಲ್‌ ಆತನ ಪುತ್ರ ಅಭಿಷೇಕ್‌ ಅವರಿಗೆ ಚಾಕುವಿನಿಂದ ಇರಿಯಲಾಗಿದೆ.

ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿ.ಎನ್.ಮಂಜುನಾಥ್‌ ಕೃತ್ಯವೆಸಗಿದ ಆರೋಪ ಕೇಳಿಬಂದಿದೆ.

ಸಿ.ಎಂ.ಗೋಪಾಲ್‌ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಮಂಜುನಾಥ್‌ನನ್ನು ಸಾಲಿಗ್ರಾಮ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕ ಮಂಜುನಾಥ್‌ನನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

 

Tags:
error: Content is protected !!