Mysore
35
few clouds

Social Media

ಮಂಗಳವಾರ, 14 ಏಪ್ರಿಲ 2026
Light
Dark

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

DCM D.K. Shivakumar says there will be a big revolution in the state by 2028

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗುತ್ತಿದ್ದೇನೆ. ನಾನು ಹೋಗದೇ ಮತ್ಯಾರು ಹೋಗಬೇಕು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎರಡೂ ಸೇರಿಸಿ ಮನರೇಗಾ ಉಳಿಸಿ ಸಮಾವೇಶ ಹಮ್ಮಿಕೊಂಡಿದ್ದೇವೆ. ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಆಗಮಿಸುತ್ತಿದ್ದು, ಸಮಾವೇಶಕ್ಕೆ ಕಾಂಗ್ರೆಸ್‌ ಪಕ್ಷದ ಎಲ್ಲಾ ಶಾಸಕರು ಆಗಮಿಸಬೇಕು. ಮನರೇಗಾ ರಕ್ಷಣೆಗೆ ಆಗ್ರಹಿಸಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲಾಗಿದೆ. ಬಾಕಿ ಇರುವ ಕ್ಷೇತ್ರಗಳಲ್ಲೂ ಮಾಡಲಾಗುತ್ತದೆ ಎಂದು ಹೇಳಿದರು.

Tags:
error: Content is protected !!