Mysore
29
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಟ್ಟಣದ ಸುಣ್ಣದ ಬೀದಿಯ ಅಸೈನಾರ್ ರಜಾಕ್ (43) ಹಾಗೂ ಬಾಳುಗೋಡು ಬಿಟ್ಟಂಗಾಲ ಗ್ರಾಮದ ಮೋಹನ ಎ.ಜಿ.ಅಶೋಕ (42) ಆರೋಪಿಗಳು. ಬಂಧಿತರಿಂದ 1 ಕೆಜಿ 60 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಂಟಿಯಂಗಡಿ ರಸ್ತೆಯ ಪ್ರೌಢಶಾಲೆ ಮೈದಾನದ ಬಳಿಯ ಬಸ್ ತಂಗುದಾಣದಲ್ಲಿ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್‌ಐಗಳಾದ ಎನ್.ಜೆ. ಲತಾ, ಬಿ.ಎಸ್. ವಾಣಿಶ್ರೀ, ಪ್ರಮೋದ್, ಎಎಸ್‌ಐ ಕೆ.ಬಿ.ಸೋಮಣ್ಣ, ಹೆಚ್.ಸಿಗಳಾದ ಎಸ್.ಎಲ್.ನವೀನ್ ಕುಮಾರ್, ಎಂ.ಬಸವರಾಜು, ಅಬ್ದುಲ್ ಮಜೀದ್, ಕೆ.ಎ.ಹನೀಫ್, ಎಂ.ಎಸ್. ಬೋಪಣ್ಣ, ರಾಧಾ, ಪಿ.ಸಿಗಳಾದ ಎಸ್.ಮಹೇಶ್, ಶಿವಪ್ರಸಾದ್, ಎಸ್.ರಾಜೇಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಶ್ಲಾಘಿಸಿದ್ದಾರೆ.

 

Tags:
error: Content is protected !!