Mysore
23
light rain

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ 

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ ಉದ್ಘಾಟನೆ ಹಾಗೂ ವಿಮಾನ ಗೋಪುರ ಮತ್ತು ಕಲಶಾರೋಹಣ ಮಹೋತ್ಸವ ನಡೆಯಲಿದ್ದು, ಸಮಾರಂಭವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.

ಫೆ.೨೬ರಂದು ಗುರುವಾರ ಸಂಜೆ ೪ ಗಂಟೆಗೆ ಕಳಸ ಪೂಜೆಯ ಮೂಲಕ ಹಾಲ್ಹರವಿ, ವೀರಗಾಸೆ, ಛತ್ರಿ-ಚಾಮರ, ನಂದಿ ಧ್ವಜ, ಮಂಗಳವಾದ್ಯಗಳ ಸಮೇತ ಗಂಗೆ ತಡಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟು ದೇವಸ್ಥಾನದ ಸ್ಥಳಕ್ಕೆ ತಲುಪಲಿದೆ. ನಂತರ ವಿವಿಧ ಪೂಜೆ, ಹೋಮ-ಹವನಗಳು ನೆರವೇರಲಿವೆ.

ಫೆ.೨೭ರಂದು ಶುಕ್ರವಾರ ಮುಂಜಾನೆ ೩.೩೦ರಿಂದ ೪.೨೦ರೊಳಗೆ ಶ್ರೀ ಶಿವಲಿಂಗ ಮತ್ತು ಗಣಪತಿ ಮೂರ್ತಿಗಳ ಶಿಲಾಯಂತ್ರದ ದೇವತಾ ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಮೃತ್ಯುಂಜಯ ಹೋಮ, ದುರ್ಗಾ ಹೋಮ, ವಿಮಾನ ಗೋಪುರದ ಕಳಶಾರೋಹಣ, ಮಹಾಬಲಿ, ಮಹಾಪೂರ್ಣಾಹುತಿ, ಅಷ್ಟೋತ್ತರ, ಮಹಾಮಂಗಳಾರತಿ ನೆರವೇರಲಿದೆ. ಈ ಎಲ್ಲಾ ಪೂಜಾ ಕಾರ್ಯಕ್ರಮಗಳನ್ನು ಕಬ್ಬಹಳ್ಳಿ ಶ್ರೀ ಜಂಗಮ ಮಠದ ಶ್ರೀ ಗುರುಸಿದ್ದಸ್ವಾಮಿಗಳವರು ನೆರವೇರಿಸಲಿದ್ದಾರೆ.

ಧಾರ್ಮಿಕ ಸಭೆ: ನಂತರ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಗಳು, ದೇವನೂರು ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮಿಗಳು, ಪಡಗೂರು ಅಡವಿ ಮಠಾಧ್ಯಕ್ಷರಾದ ಶ್ರೀ ಶಿವಲಿಂಗೇಂದ್ರ ಸ್ವಾಮಿಗಳು, ಸೋಮಹಳ್ಳಿಯ ವೀರಸಿಂಹಾಸನ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಸ್ವಾಮಿಗಳು, ವಿರಕ್ತ ಮಠದ ತೋಂಟದಾರ್ಯ ಸ್ವಾಮಿಗಳು, ಶ್ರೀ ಚನ್ನಬಸವಸ್ವಾಮಿಗಳು, ಶ್ರೀ ಸರ್ಪಭೂಷಣ ಸ್ವಾಮಿಗಳು, ಮತ್ತಿತರ ಸ್ಥಳೀಯ ಮಠಾಧೀಶರು ಭಾಗಿಯಾಗಲಿದ್ದಾರೆ.

” ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಾಸಕರಾದ ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಇತರರು ಭಾಗಿಯಾಗಲಿದ್ದಾರೆ”

 

 

Tags:
error: Content is protected !!