Mysore
23
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಉದ್ಯೋಗಾಕಾಂಕ್ಷಿಗಳ ಆಶೋತ್ತರ ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಜೆಡಿಎಸ್‌ ಆಕ್ರೋಶ

ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು ಖಾಲಿ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಜೆಡಿಎಸ್‌ ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವು, ಒಂದು ವರ್ಷದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಬುರುಡೆ ಬಿಟ್ಟಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಕುರ್ಚಿಗಾಗಿ ಪ್ರತಿ ನಿತ್ಯ ಹೋರಾಡುತ್ತಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೇ, ಬದುಕು ಅತಂತ್ರವಾಗಿದೆ ಎಂದು ಆಕ್ರೋಶ ಹೊರಹಾಕಿದೆ.

ಉದ್ಯೋಗಾಕಾಂಕ್ಷಿಗಳ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯುವ ಜನತೆ ಸಿಡಿದೆದ್ದಿದೆ. ಖಾಲಿ ಇರುವ 2.85 ಲಕ್ಷಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ಯುವ ಜನತೆ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದೆ.

 

Tags:
error: Content is protected !!