Mysore
31
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ನಿವಾರಣೆ ಮಾಡುವಂತೆ ಸುರ್ಜೆವಾಲಾ ಬಳಿ ಮನವಿ ಮಾಡಿದ್ದೇನೆ. ರಾಜಕೀಯವಾಗಿ ರಾಜ್ಯದಲ್ಲಿ ಯಾವುದೂ ಸರಿಯಿಲ್ಲ. ರಾಜ್ಯದಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಹೀಗೆ ಆದರೆ ಬೇರೆ ಪಕ್ಷಕ್ಕೂ ನಮ್ಮ ಪಕ್ಷಕ್ಕೂ ಏನು ವ್ಯತ್ಯಾಸ? ಪಕ್ಷದ ಕಾರ್ಯಾಧ್ಯಕ್ಷನಾಗಿ ನನಗೂ ಜವಾಬ್ದಾರಿಗಳಿವೆ. ಅನಾಹುತ ಆಗುವ ಮುನ್ನವೇ ಹೈಕಮಾಂಡ್‌ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ಇನ್ನು ಒಂದು ಬಾರಿ ಗೆದ್ದವರು ಸಚಿವರಾಗಬೇಕಾದರೆ, ಆರನೇ ಬಾರಿ ಗೆದ್ದವರು ಸಿಎಂ ಆಗಬಾರದಾ? ರಾಜ್ಯದಲ್ಲಿ ಹಾವು ಮುಂಗುಸಿ ಆಟ ನಡೆಯುತ್ತಿದೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್‌. ಈ ಕುರಿತು ವರಿಷ್ಠರ ಗಮನಕ್ಕೆ ತಂದಿರುವೆ ಎಂದು ಹೇಳಿದರು.

Tags:
error: Content is protected !!