Mysore
21
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಓದುಗರ ಪತ್ರ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ ಸಾರ್ವಜನಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ರಾಜೂರು, ಕಡಬೂರು, ಶೆಟ್ಟಹಳ್ಳಿ, ದುಗ್ಗಳ್ಳಿ ಮಾರ್ಗವಾಗಿ ಎರಡು ಬಸ್ಸುಗಳು ಸರಗೂರಿನಿಂದ ಹುಲ್ಲಹಳ್ಳಿಗೆ ಹಾಗೂ ಹುಲ್ಲಹಳ್ಳಿಯಿಂದ ಸರಗೂರಿಗೆ ಪ್ರತಿನಿತ್ಯ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸಂಚರಿಸಿದರೆ ತುಂಬಾ ಅನುಕೂಲವಾಗುತ್ತದೆ.

ಸಾರಿಗೆ ನಿಗಮದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಈ ಮಾರ್ಗದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

Tags:
error: Content is protected !!